Call Us :
+91 96860 00046
+91 0824 2230452
info@shakthi.edu.in

ಶಕ್ತಿ ವಸತಿ ಶಾಲೆಯ ಅಧ್ಯಾಪಕರ ಮಾನವ ಸಂಪನ್ಮೂಲ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ

ಮಂಗಳೂರು : ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಆಯೋಜಿಸಲಾಗಿರುವ ಅಧ್ಯಾಪಕರ ಒಂದು ದಿನದ ವಿದ್ಯಾರ್ಥಿಗಳೊಡನೆ ತರಗತಿಯಲ್ಲಿ ಸಂವಹನೆ ಹಾಗೂ ಮಾನವ ಸಂಪನ್ಮೂಲ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಶನಿವಾರದಂದು ಸಮಾರೋಪಗೊಂಡಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಗರದ ಹೊಟೇಲು ಉದ್ಯಮಿ ಶ್ರೀ ರಾಜಗೋಪಾಲ ರೈ ಆಗಮಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಅಧ್ಯಾಪಕರು ಈಗಿನ ಕಾಲಘಟ್ಟದಲ್ಲಿ ಸೃಜನಾತ್ಮಕ ಹಾಗೂ ಸಕ್ರಿಯರಾಗಿರಬೇಕು. ವಿದ್ಯಾರ್ಥಿಗಳಿಗೆ ತಾಯಿಯ ರೂಪದಲ್ಲಿ ಕಲಿಸಬೇಕು. ಅದಕ್ಕೆ ಬೇಕಾಗಿರುವ ಎಲ್ಲಾ ತಯಾರಿಯನ್ನು ಮಾಡಿಕೊಂಡು ತರಗತಿಗೆ ಬರಬೇಕಾಗುತ್ತದೆ. ನಮ್ಮಲ್ಲಿ ಒಳ್ಳೆಯ ಅಧ್ಯಯನ ಹಾಗೂ ಚಿಂತನೆ ಇರಬೇಕು. ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಕಲಿಸುವ ಗುಣವನ್ನು ಪ್ರತಿಯೊಬ್ಬ ಅಧ್ಯಾಪಕರು ರೂಢಿಸಬೇಕೆಂದು ಕರೆ ನೀಡಿದರು. ಮುಂದುವರಿದು ಮಾತನಾಡಿದ ಅವರು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸುವಲ್ಲಿ ಅಧ್ಯಾಪಕರ ಪಾತ್ರ ಮಹತ್ತರವಾದದ್ದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಶಕ್ತಿ ಪ. ಪೂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರಭಾಕರ.ಜಿ.ಎಸ್. ಮಾತನಾಡಿ ಶಾಲೆಯಲ್ಲಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಒಂದು ಕುಟುಂಬ ಇದ್ದಂತೆ. ಪೋಷಕರು ಶಾಲೆಯ ಮೇಲೆ ವಿಶ್ವಾಸವನ್ನು ಇರಿಸಿ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಿರುತ್ತಾರೆ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಒಬ್ಬ ಶಿಕ್ಷಕನ ಹೊಣೆಯಾಗಿರುತ್ತದೆ.

ಪ್ರಸ್ತುತ ಕಂಪ್ಯೂಟರ್ ಯುಗದಲ್ಲಿ ಅಧ್ಯಾಪಕರ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮವು ಮಹತ್ವವೆನಿಸುತ್ತದೆ. ಶಕ್ತಿ ವಸತಿ ಶಾಲೆಯ ಅಧ್ಯಾಪಕರು ಈ ಕಾರ್ಯಗಾರದ ಸಂಪೂರ್ಣ ಲಾಭವನ್ನು ಪಡೆದು ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಬೇಕೆಂದು ಕರೆ ನೀಡಿದರು. ಕಾರ್ಯಗಾರದ ಕುರಿತಂತೆ ಅಧ್ಯಾಪಕರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ ನಾಕ್, ಶಕ್ತಿ ಎಜ್ಯುಕೇಶನ್ ಟ್ರಸ್ಟ್ ನ ಟ್ರಸ್ಟಿಯಾದ ಡಾ. ಮುರಳೀಧರ್ ನಾಕ್, ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ.ಕೆ, ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಂ ಬಾನು ಹಾಗೂ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಶಿಕಲಾ ಎಂ.ಎನ್ ನೆರೆವೇರಿಸಿದರು.

About School

Shakthi Preschool

Welcome to Shakthi Preschool, a progressive year-round preschool providing a...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...