Call Us :
+91 96860 00046
+91 0824 2230452
info@shakthi.edu.in

ಶಕ್ತಿ ಕ್ಯಾನ್ ಕ್ರಿಯೇಟ್ – ದಸರಾ ರಜಾಕಾಲದ ಶಿಬಿರದ ಉದ್ಘಾಟನಾ ಕಾರ್ಯಕ್ರಮ

ಶಕ್ತಿ ನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವಕಾಲೇಜು ವತಿಯಿಂದ ಶಕ್ತಿ ಕ್ಯಾನ್ ಕ್ರಿಯೆಟ್ – ದಸರಾ ರಜಾಕಾಲದ ಶಿಬಿರದ ಉದ್ಘಾಟನೆಯು 9-10 – 2018 ರಂದು ಬೆಳಗ್ಗೆ 11-00 ಗಂಟೆಗೆ ನೆರವೇರಲಿದೆ.

ಉದ್ಘಾಟನೆಯನ್ನು ಮಂಗಳೂರು ದಕ್ಷಿಣದ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಅಖಿಲಾ ಅಳ್ವ, ಸುದಾನ ವಸತಿ ಶಾಲೆ ಪುತ್ತೂರಿನ ಸಂಚಾಲಕರಾದ ಶ್ರೀ ವಿಜಯ ಹಾರ್ವಿನ್ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗೋಪಾಲ ಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಕೆ.ಸಿ. ನಾಯ್ಕ್ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ  ಸದಸ್ಯೆ ಸುಗುಣ  ಸಿ. ನಾಯ್ಕ್, ಆಡಳಿತಾಧಿಕಾರಿ ಬೈಕಾಡಿ ಜನಾರ್ಧನ ಆಚಾರ್, ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪ.ಪೂ. ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ. ಎಸ್., ಅಭಿವೃದ್ಧಿ ಅಧಿಕಾರಿ ನಸಿಮಾ ಭಾನು ಉಪಸ್ಥಿತರಿರುತ್ತಾರೆ.

About School

Shakthi Preschool

Welcome to Shakthi Preschool, a progressive year-round preschool providing a...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...